ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm