ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm