ಬ್ರೇಕಿಂಗ್ ನ್ಯೂಸ್
12-02-24 07:43 pm Mangalore Correspondent ಕರಾವಳಿ
ಮಂಗಳೂರು, ಫೆ.12: ಹಿಂದು ದೇವರ ಅವಹೇಳನ ಆರೋಪದ ಹಿನ್ನೆಲೆಯಲ್ಲಿ ಇಡೀ ದಿನ ಪೋಷಕರ ಧರಣಿ, ಶಾಸಕ ವೇದವ್ಯಾಸ ಕಾಮತ್ ಧಿಕ್ಕಾರದ ಕೂಗು, ತೀವ್ರ ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಬಿಸಿ ತಟ್ಟಿಸಿಕೊಂಡ ಜಿಲ್ಲಾಡಳಿತ ಶಾಲಾಡಳಿತ ಮಂಡಳಿಯ ಜೊತೆಗೆ ಮಾತುಕತೆ ನಡೆಸಿ ಆರೋಪಿತ ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ವೆಲೆನ್ಸಿಯಾದ ಜೆರೋಸಾ ಶಿಕ್ಷಣ ಸಂಸ್ಥೆಯವರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಆರೋಪಿತ ಸಿಸ್ಟರ್ ಪ್ರಭಾ ಅವರನ್ನು ತಕ್ಷಣದಿಂದ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಕ ಮಾಡಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳ ತನಿಖೆಗೆ ನಾವು ಸಹಕರಿಸುತ್ತೇವೆ. ಸದರಿ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಲೆಯ ಪರವಾಗಿ ಮುಖ್ಯ ಶಿಕ್ಷಕಿ ಅನಿತಾ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಈ ಘಟನೆ ದುರದೃಷ್ಟಕರವಾಗಿದ್ದು, ನಮ್ಮ ಮತ್ತು ಪೋಷಕರ ಮಧ್ಯೆ ಅಪನಂಬಿಕೆಯನ್ನು ಸೃಷ್ಟಿಸಿದೆ. ನಾವು ಎಲ್ಲ ಧರ್ಮಗಳು, ನಂಬಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರ ಸಹಕಾರವನ್ನು ಬಯಸುತ್ತೇವೆ. ಜೆರೋಸಾ ಶಿಕ್ಷಣ ಸಂಸ್ಥೆಗೆ 60 ವರ್ಷಗಳ ಇತಿಹಾಸವಿದ್ದು, ಈವರೆಗೆ ಇಂತಹ ಘಟನೆ ನಡೆದಿಲ್ಲ ಎಂದವರು ಹೇಳಿದ್ದಾರೆ. ಸಂಜೆಯ ವೇಳೆಗೆ ಶಾಸಕ ವೇದವ್ಯಾಸ ಕಾಮತ್, ಶಾಲಾಡಳಿತ ಮಂಡಳಿ ಸದಸ್ಯರು ಮತ್ತು ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಗೆ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಇಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಅಲ್ಲಿ ಸೇರಿದ್ದವರನ್ನು ಸಮಾಧಾನ ಪಡಿಸಿ ಪೊಲೀಸ್ ಕಮಿಷನರ್ ಜೊತೆಗೆ ಶಾಲೆಯ ಒಳಗಡೆ ಹೋಗಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದಾರೆ.











ಸಂಜೆ 4.30ರಿಂದ 6.45ರ ವರೆಗೂ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತುಕತೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆಗೆ ಎಲ್ಲರೂ ಸಹಕರಿಸಬೇಕು. ಆದಷ್ಟು ತ್ವರಿತವಾಗಿ ತನಿಖೆ ನಡೆಸುತ್ತೇವೆ. ಶಿಕ್ಷಕಿ ವಿರುದ್ಧ ಶಾಲಾಡಳಿತ ಮಂಡಳಿ ಸದಸ್ಯರು ಕ್ರಮ ತೆಗೆದುಕೊಂಡಿದ್ದಾರೆ. ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಎಲ್ಲ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಸುದೀರ್ಘ ಮಾತುಕತೆಯಾದರೂ, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವ ಆದೇಶ ಬರದೇ ಇದ್ದುದರಿಂದ ಸಂಜೆ 6 ಗಂಟೆಯಾಗುತ್ತಿದ್ದಂತೆ ಮತ್ತೆ ಪೋಷಕರು ಶಾಲೆಯ ಆವರಣದಲ್ಲಿ ಸೇರಿದ್ದರು. ಜಿಲ್ಲಾಧಿಕಾರಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಹೊರಬಂದು ಹೇಳಿಕೆ ನೀಡುತ್ತಿದ್ದಂತೆ, ಪೋಷಕರು ಜೈಕಾರ ಕೂಗಿ ಸ್ಥಳದಿಂದ ನಿರ್ಗಮಿಸಿದ್ದಾರೆ.
Mangalore Jeppu Gerosa School controversy, Teacher dismissed from school after protest from parents. Finally the school HeadMinister Anitha confirmed the media that teacher Prabha has been dismissed from the school.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm