ಬ್ರೇಕಿಂಗ್ ನ್ಯೂಸ್
13-02-24 12:23 pm Mangalore Correspondent ಕರಾವಳಿ
ಮಂಗಳೂರ, ಫೆ.13: ಸೈಂಟ್ ಜೆರೋಸಾ ಶಾಲೆಯ ಸಿಸ್ಟರ್ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅದರ ಮೇಲೆ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಆದ ಕ್ರಮ, ನಿಯಮಗಳಿವೆ. ಆ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. "ಬೀದಿ ನ್ಯಾಯ" ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು. ಶಾಸಕ ವೇದವ್ಯಾಸ ಕಾಮತ್ ಇದನ್ನೆಲ್ಲ ಧಿಕ್ಕರಿಸಿ ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ಮೆರೆದಿರುವುದು ಆಘಾತಕಾರಿ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಅದರಲ್ಲೂ ಪ್ರಾಥಮಿಕ ಶಾಲೆಯ ಮುಗ್ಧ ವಿದ್ಯಾರ್ಥಿಗಳನ್ನು ತಮ್ಮದೇ ಶಾಲೆಯ ವಿರುದ್ದ ಮುತ್ತಿಗೆಗೆ ಬಳಸಿರುವುದು, ಧಾರ್ಮಿಕ ಘೋಷಣೆಗಳನ್ನು ಕೂಗಿಸಿರುವುದು ನಾಚಿಕೆಗೇಡಿನ ಕೃತ್ಯ. ಶಾಸಕನಿಗಿರಬೇಕಾದ ಕನಿಷ್ಟ ಪ್ರಜ್ಞೆ, ಸಮಾಜದ ಭವಿಷ್ಯದ ಕುರಿತು ಕಾಳಜಿ ವೇದವ್ಯಾಸ ಕಾಮತರಿಗೆ ಇಲ್ಲ ಎಂಬುದು ಇಂದಿನ ಘಟನೆಯಿಂದ ಸಾಬೀತಾಗಿದೆ. ಮಂಗಳೂರಿನ ಸಾಮಾನ್ಯ, ಕಡಿಮೆ ಆದಾಯದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಿರುವ ಡೊನೇಷನ್ ಹಾವಳಿ, ದುಬಾರಿ ಫೀಸು, ನಿಯಮ ಬಾಹಿರ ಶಿಕ್ಷಣ ವ್ಯವಸ್ಥೆಯ ಕುರಿತು ವಿಧಾನ ಸಭೆಯಲ್ಲಿ ಧ್ವನಿ ಎತ್ತಬೇಕಿದ್ದ ಶಾಸಕರು, ಅದರ ಬದಲಿಗೆ ಅಧಿವೇಶನ ತೊರೆದು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯೊಂದರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು, ಮತೀಯ ಭಾವನೆ ಕೆರಳಿಸಲು ಪ್ರಕರಣವನ್ನು ಬಳಸುತ್ತಿರುವುದು ಖಂಡನೀಯ.











ಇದರ ಹಿಂದೆ ಲೋಕಸಭಾ ಚುನಾವಣೆಯ ಸಿದ್ದತೆ ಇರುವುದು ಸ್ಪಷ್ಟ. ಜಿಲ್ಲಾಡಳಿತ, ಸರಕಾರ ಇಂತಹ ಗೂಂಡಾಗಿರಿಯನ್ನು ಸಹಿಸಬಾರದು, ಕಾನೂನಿನ ಪಾಠ, ಜವಾಬ್ದಾರಿಯನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಬೇಕು, ಹಿಂಸೆಗೆ ಪ್ರಚೋದಿಸುವ, ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Jeppu Gerosa school controversy, Muneer Katipalla slams Vedavyas Kamath over his behaviour at school premises. Mla was found shouting slogans along with little school students.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm