ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.




ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm