ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.




ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm