ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.




ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm