ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.
ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm