ಬ್ರೇಕಿಂಗ್ ನ್ಯೂಸ್
15-02-24 06:04 pm Mangalore Correspondent ಕರಾವಳಿ
ಮಂಗಳೂರು, ಫೆ.15: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದು ದೇವರನ್ನು ನಿಂದಿಸಿದ್ದಾರೆಂದು ದೂರು ಕೊಟ್ಟರೂ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ. ಆದರೆ, ಶಾಸಕರು ಅಲ್ಲಿನ ಮಕ್ಕಳ ಪೋಷಕರ ಜೊತೆಗೆ ನಿಂತು ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ದಾಖಲು ಮಾಡಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಹಿಂದು ವಿರೋಧಿ ನೀತಿಯನ್ನು ಸೂಚಿಸುತ್ತದೆ. ಜೆರೋಸಾ ಶಾಲೆಯ ಘಟನೆ ಮತ್ತು ಶಾಸಕರು ಮತ್ತು ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ಫೆ.19ರಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹರತಾಳ ನಡೆಸಲಾಗುವುದು ಎಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಹೇಳಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಜೈಶ್ರೀರಾಮ್ ಘೋಷಣೆ ಕೂಗಿದ್ದು ರಾಜಕೀಯ ಘೋಷಣೆ ಅಲ್ಲ. ಅದು ಹಿಂದುಗಳು ಆರಾಧಿಸುವ ದೇವರ ಹೆಸರು. ಕೋಟ್ಯಂತರ ಭಕ್ತರ ಆರಾಧ್ಯ ದೇವರು, ಶ್ರೀರಾಮ ಈ ದೇಶದ ಅಸ್ಮಿತೆ. ಶಾಲೆಯ ಮಕ್ಕಳು ಪೋಷಕರ ಜೊತೆ ಸೇರಿ ಘೋಷಣೆ ಕೂಗಿದ್ದಾರೆ. ಅದರಲ್ಲಿ ರಾಜಕೀಯ ಅಥವಾ ಕೋಮು ದ್ವೇಷ ಎಲ್ಲಿ ಬರುತ್ತದೆ ಎಂದು ಪ್ರಶ್ನಿಸಿದರು.
ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೆ ಅವಹೇಳನ ಮಾಡಿದ್ದಲ್ಲದೆ, ನಾಗದೇವರು, ಗಣಪತಿ ದೇವರನ್ನು ನಿಂದಿಸಿರುವ ಶಿಕ್ಷಕಿ ಸಿಸ್ಟರ್ ಪ್ರಭಾ ಅವರ ವಿರುದ್ಧ ಪೊಲೀಸರು ಕೇಸು ದಾಖಲಿಸಬೇಕು ಎಂದು ಆಗ್ರಹಿಸಿ ನಾವು ಮಂಗಳೂರಿನ ಎಲ್ಲ ಠಾಣೆಗಳ ಮುಂದೆ ಜೈಶ್ರೀರಾಮ್ ಘೋಷಣೆ ಕೂಗುತ್ತೇವೆ. ಹಿಂದು ದೇವರ ಅವಹೇಳನ ವಿಚಾರದಲ್ಲಿ ಪೋಷಕರು ಕೊಟ್ಟ ದೂರನ್ನು ಪೊಲೀಸರು ಸ್ವೀಕರಿಸಿಲ್ಲ. ಕಾಂಗ್ರೆಸ್ ಸರಕಾರದ ಒತ್ತಡದ ಕಾರಣದಿಂದಲೇ ಆ ದೂರನ್ನು ಪರಿಗಣಿಸಿಲ್ಲ ಎಂಬ ಮಾಹಿತಿ ಇದೆ. ಇದನ್ನು ಹಿಂದು ಸಮಾಜ ಸಹಿಸುವುದಿಲ್ಲ. ತಕ್ಷಣ ಸಿಸ್ಟರ್ ಪ್ರಭಾ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು. ಜೊತೆಗೆ, ನಮ್ಮ ನಾಯಕರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದವರು ಆಗ್ರಹಿಸಿದರು.
ವಿಎಚ್ ಪಿ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್ ಮಾತನಾಡಿ, ಪೊಲೀಸರು ಕಾಂಗ್ರೆಸ್ ಮುಖಂಡರ ಕುಮ್ಮಕ್ಕಿನಿಂದ ಕೇಸು ಹಾಕಿದ್ದಾರೆ. ಹಾಗಾದ್ರೆ ಪೊಲೀಸರು ಶರಣ್ ಪಂಪ್ವೆಲ್ ಸೇರಿ ಯಾರನ್ನಾದರೂ ಬಂಧಿಸಿ ನೋಡಲಿ. ಆಗ ನಾವು ನೋಡಿಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.
Mangalore Vhp to hold protest near Police stations over filing case against Sharan Pumpwell in Gerosa School controversy. Even though we have filed case against the school no action has been taken but the Congress governmemt has made police register FIR against Sharan and MLA Vedavyas, Bharath Shetty intentionally arrangeintentionally alleged VHP.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am