ಉಪ್ಪಿನಂಗಡಿ ; ಮಲಗಿದಲ್ಲೇ ಹೃದಯಾಘಾತಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ 

16-02-24 12:08 pm       Mangalore Correspondent   ಕರಾವಳಿ

ಕಾಲೇಜು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಾತ್ರಿ ಮಲಗಿದಲ್ಲಿಯೇ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ. 

ಪುತ್ತೂರು, ಫೆ.16: ಕಾಲೇಜು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಾತ್ರಿ ಮಲಗಿದಲ್ಲಿಯೇ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ. 

ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿಯ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹಫೀಝಾ ಕಲಿಯುತ್ತಿದ್ದರು. ಪರೀಕ್ಷೆ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ವರೆಗೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ ಆಕೆ ಬಳಿಕ ಮಲಗಿದ್ದಳು. 

ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಮನೆಯವರು ಎಬ್ಬಿಸಲು ಹೋದಾಗ ಹಫೀಝಾ ಮೃತಪಟ್ಟಿದ್ದಳು. ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‌ನ ಹಳೇ ವಿದ್ಯಾರ್ಥಿನಿಯಾಗಿದ್ದ ಹಫೀಝಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಹದಿಹರೆಯದ ವಿದ್ಯಾರ್ಥಿನಿ ದಿಢೀರ್ ಸಾವು ಕಂಡಿದ್ದು ಕುಟುಂಬಸ್ಥರನ್ನು ಆಘಾತ ಮೂಡಿಸಿದೆ.

A college student died of cardiac arrest while sleeping at Nekkiladi near Uppinangady on February 16.