ಬ್ರೇಕಿಂಗ್ ನ್ಯೂಸ್
24-11-20 07:21 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 24: ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿಘ್ನೇಶ್ ನಾಯಕ್ ಎಂಬ ಯುವಕನ ಆತ್ಮಹತ್ಯೆ ಪ್ರಕರಣ ಈಗ ಸಾರ್ವಜನಿಕರಲ್ಲಿ ಸಂಶಯಕ್ಕೆ ಕಾರಣವಾಗಿದೆ. ಬಾಳಿಗಾ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನರೇಶ್ ಶೆಣೈಗೆ ಸೇರಿದ ಆಯುರ್ವೇದಿಕ್ ಶಾಪ್ ನಲ್ಲಿ ಕೆಲಸಕ್ಕಿದ್ದ ಯುವಕ ದಿಢೀರ್ ಆಗಿ ಸಾವಿಗೆ ಶರಣಾಗಿದ್ದು ಸಂಶಯಕ್ಕೆ ಕಾರಣವಾಗಿದೆ.
ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸಬೇಕಾಗಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮಿಥುನ್ ರೈ, ವಿನಾಯಕ್ ಬಾಳಿಗಾ ಹತ್ಯೆ ಬಳಿಕ ವಿಘ್ನೇಶ್ ನಾಪತ್ತೆಯಾಗಿದ್ದ. ಹತ್ಯೆಗೆ ಬಳಸಿದ್ದ ಕ್ವಾಲಿಸ್ ಕಾರು ವಿಘ್ನೇಶ್ ಹೆಸರಲ್ಲಿತ್ತು. ಇದೀಗ ನಿನ್ನೆ ಜಿಲ್ಲಾ ನ್ಯಾಯಾಲಯದಲ್ಲಿ ವಿನಾಯಕ್ ಬಾಳಿಗಾ ಕೊಲೆ ಪ್ರಕರಣದಲ್ಲಿ ಅಂತಿಮ ಹಂತದ ವಿಚಾರಣೆ ಇತ್ತು. ಅದರಲ್ಲಿ ವಿಘ್ನೇಶ್ ಪ್ರಮುಖ ಸಾಕ್ಷಿಯಾಗಿ ಹಾಜರಾಗಬೇಕಿತ್ತು.

ಅದೇ ದಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂದರೆ, ಇದರಲ್ಲಿ ಪ್ರಚೋದನೆ ಇರುವ ಸಂಶಯವಿದೆ. ನರೇಶ್ ಶೆಣೈ ಕೈವಾಡ ಇರುವ ಬಗ್ಗೆ ಸಂಶಯ ಜನರಲ್ಲಿದೆ. ಇದಕ್ಕಾಗಿ ನರೇಶ್ ಶೆಣೈಯನ್ನು ಪೊಲೀಸರು ತನಿಖೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.
ವಿನಾಯಕ ಬಾಳಿಗಾ ಸೋದರಿಗೂ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸರು ರಕ್ಷಣೆ ನೀಡಬೇಕಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಯೇ ಎಂಬ ನಿಟ್ಟಿನಲ್ಲಿ ನರೇಶ್ ಶೆಣೈಯನ್ನು ತನಿಖೆ ನಡೆಸಬೇಕು. ನರೇಶ್ ಮತ್ತು ವಿಘ್ನೇಷ್ ಕಾಲ್ ಡಿಟೈಲ್ಸ್ ತನಿಖೆ ಮಾಡಬೇಕು ಎಂದು ಹೇಳಿದ ಮಿಥುನ್ ರೈ, ವಿಘ್ನೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದಿದ್ದಾರೆ.

2016ರಲ್ಲಿ ನಡೆದಿದ್ದ ವಿನಾಯಕ್ ಬಾಳಿಗಾ ಪ್ರಕರಣ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು ಕೊನೆಯ ಹಂತಕ್ಕೆ ಬಂದಿದೆ. ಇದೇ ವೇಳೆ, ಪ್ರಕರಣದ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿದ್ದ ವಿಘ್ನೇಶ್ ಸಾವಿಗೆ ಶರಣಾಗಿದ್ದು ಸಂಶಯಕ್ಕೆ ಕಾರಣವಾಗಿದೆ.
Video:
Witness in Activist murder case and close aide of Naresh Shenoy Vignesh Nayak was found dead by suicide at his residence. Congress leader Mithun Rai has urged for comprehensive probe in this case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm