ಬ್ರೇಕಿಂಗ್ ನ್ಯೂಸ್
16-02-24 08:34 pm Mangalore Correspondent ಕರಾವಳಿ
ಬೆಂಗಳೂರು, ಫೆ.16: ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಜೆರೋಸಾ ಶಾಲೆಯ ಮುಂದೆ ಅಕ್ರಮವಾಗಿ ತನ್ನ ಬೆಂಬಲಿಗರನ್ನು ಮತ್ತು ಪೋಷಕರನ್ನು ಸೇರಿಸಿ ಪ್ರತಿಭಟನೆ ನಡೆಸಿದ್ದು ಆಮೂಲಕ ಕೋಮು ಸಾಮರಸ್ಯ ಕದಡುವ ಯತ್ನ ಮಾಡಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಯಾವುದೇ ಅನಪೇಕ್ಷಿತ ಘಟನೆಯಾದರೂ ಅದರ ಬಗ್ಗೆ ಕೂಲಂಕಷ ತನಿಖೆ ಮಾಡಿಸುವುದು ಶಾಸಕನ ಕರ್ತವ್ಯ. ಅದು ಬಿಟ್ಟು ಶಾಲೆಯ ಶಿಕ್ಷಕಿ ಬಗ್ಗೆ ಆರೋಪ ಬಂದ ಕೂಡಲೇ ಶಾಲೆಯ ಹೊರಗಡೆ ನಿಂತು ಪ್ರತಿಭಟನೆ ನಡೆಸಿ, ಮಕ್ಕಳನ್ನು ಅದೇ ಶಾಲೆಯ ವಿರುದ್ಧ ಎತ್ತಿಕಟ್ಟಿದ್ದಾರೆ.

ಆರೋಪದ ಬಗ್ಗೆ ಶಾಲೆಯ ಪಿಟಿಎ ಅಥವಾ ಮುಖ್ಯ ಶಿಕ್ಷಕಿಗೆ ಪೋಷಕರು ಲಿಖಿತ ದೂರನ್ನು ನೀಡಿಲ್ಲ. ಆಡಿಯೋ ವೈರಲ್ ಆಗಿದ್ದನ್ನೇ ಮುಂದಿಟ್ಟು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಪ್ರತಿಭಟನೆ ನಡೆಸಿರುವುದು ಜನಪ್ರತಿನಿಧಿಯಾಗಿ ಮೂಲ ಉದ್ದೇಶವನ್ನು ಉಲ್ಲಂಘಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಹೇಳಿ, ಇಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಭರತ್ ಶೆಟ್ಟಿ ಕ್ರಿಸ್ತಿಯನ್ ಶಾಲೆಗಳನ್ನು ಬಹಿಷ್ಕರಿಸುವಂತೆ ಹೇಳಿ ಹಿಂದುಗಳನ್ನು ಪ್ರಚೋದಿಸಿದ್ದಾರೆ. ಹೀಗಾಗಿ ಅವರಿಬ್ಬರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ದೂರಿನ ಜೊತೆಗೆ ಆಡಿಯೋ, ವಿಡಿಯೋ ಕ್ಲಿಪ್ಪಿಂಗ್, ಪಾಂಡೇಶ್ವರ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಪ್ರತಿ, ಮಹಿಳೆಯೊಬ್ಬರ ಆಡಿಯೋ ವೈರಲ್ ಬಗ್ಗೆ ನೀಡಿರುವ ದೂರಿನ ಪ್ರತಿಯನ್ನು ನೀಡಿದ್ದಾರೆ. ಜೆಪ್ಪಿನಮೊಗರು ನಿವಾಸಿ ಭಾಸ್ಕರ್ ರಾವ್ ಹೆಸರಿನಲ್ಲಿ ದೂರನ್ನು ಬರೆಯಲಾಗಿದ್ದು ಐವಾನ್ ಡಿಸೋಜ ನೇತೃತ್ವದಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
Congress leader Ivan Dsouza requests speaker Ut Khader to take action against Mla Vedavyas and Bharath over gerosa school matter.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm