ಬ್ರೇಕಿಂಗ್ ನ್ಯೂಸ್
17-02-24 05:41 pm Mangalore Correspondent ಕರಾವಳಿ
ಮಂಗಳೂರು, ಫೆ.17: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಗದ್ದೆಯಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆ. ಅದನ್ನು ಮತ್ತೆ ನೆನಪಿಸುತ್ತೇನೆ. ಚುನಾವಣೆಯಲ್ಲಿ ಏನು ಹೇಳಿದ್ದೆವೋ ಐದು ಗ್ಯಾರಂಟಿಯನ್ನೂ ಕೊಟ್ಟಿದ್ದೇವೆ. ಇದನ್ನೇ ಮುಂದಿಟ್ಟು ಕಾರ್ಯಕರ್ತರು ಮತ ಕೇಳಬೇಕು. ಎರಡು ಸೀಟು ಇರೋದು ಅಂತ ಅಳುಕು ಬೇಡ. ಸೋತಲ್ಲೇ ಗೆಲ್ಲಬೇಕಾಗಿದೆ, ರಾಜ್ಯದಲ್ಲಿ ನಾವು 20 ಸೀಟು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಡ್ಯಾರಿನಲ್ಲಿ ನಡೆದ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಐದು ಬೆರಳು ಸೇರಿ ಮುಷ್ಟಿ ಗಟ್ಟಿಯಾಯ್ತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯ್ತು. ತೆನೆಹೊತ್ತ ಮಹಿಳೆ ಕಾಂಗ್ರೆಸ್ ಗ್ಯಾರಂಟಿಗೆ ಹೆದರಿ ಬಿಜೆಪಿ ಸೇರಿದ್ದಾಳೆ ಎಂದು ಅಣಕಿಸಿದ ಡಿಕೆಶಿ, ನನ್ನನ್ನು ಬಂಡೆಯಂತೆ ಕರೆಯುತ್ತೀರಿ, ಅದು ಚಪ್ಪಡಿಯಾಗಲಿ, ವಿಧಾನಸೌಧಕ್ಕೆ ಚಪ್ಪಡಿಯಾಗಲಿ, ನೀವೆಲ್ಲ ಅದನ್ನು ತುಳಿದು ವಿಧಾನಸೌಧಕ್ಕೆ ಬರುತ್ತೀರಿ ಎಂದಿದ್ದೆ. 136 ಶಾಸಕರನ್ನು ಗೆಲ್ಲಿಸಿ ಕೊಟ್ಟಿದ್ದೀರಿ. ನನಗೆ ಭರವಸೆ ಇದೆ, ರಾಜ್ಯದಲ್ಲಿ 20 ಸೀಟನ್ನು ಗೆಲ್ಲುತ್ತೇವೆ ಎಂದರು.

ಕಾರ್ಯಕರ್ತರು ಆತ್ಮವಿಶ್ವಾಸ ಕಳಕೊಳ್ಳಬೇಡಿ. ಜಿಲ್ಲೆಯಲ್ಲಿ ಎರಡು ಸೀಟು ಇರೋದು ಅಂತ ಅಳುಕು ಬೇಡ. 2011ರಲ್ಲಿ ಸದಾನಂದ ಗೌಡರು ಉಡುಪಿ ಎಂಪಿ ಆಗಿದ್ದಾಗ ಉಪ ಚುನಾವಣೆಯಲ್ಲಿ ನಾವು ಸಂಸದ್ ಸ್ಥಾನವನ್ನು ಗೆದ್ದು ಸಂಸತ್ತಿಗೆ ಕಳಿಸಿದ ಉದಾಹರಣೆ ಇದೆ. ಹಿಂದೆ ದೇವೇಗೌಡರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದರು. ಇವತ್ತು ತನ್ನ ಮಗನನ್ನೇ ಬಿಜೆಪಿಗೆ ಕಳಿಸಿದ್ದಾರೆ. ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ, ಏನು ಕೂಡ ಆಗಬಹುದು. ಅದರ ಬಗ್ಗೆ ಟೀಕೆ ಮಾಡಲ್ಲ. ಕಾಂಗ್ರೆಸ್ ಬಗ್ಗೆ ಭಯಗೊಂಡಿದ್ದರಿಂದ ಇವರು ಒಟ್ಟು ಸೇರಿ ಚುನಾವಣೆಗೆ ಹೊರಟಿದ್ದಾರೆ. ಆದರೆ ಜನರು ನಮ್ಮ ಸಾಧನೆ ನೋಡಿ ಮತ ಕೊಡಲಿದ್ದಾರೆ.
ಪ್ರಧಾನಿ ಮೋದಿ 375 ಸ್ಥಾನ ಗೆಲ್ತೀವಿ ಎಂದಿದ್ದಾರೆ, ಆದರೆ ಅದು ಸಾಧ್ಯವಿಲ್ಲ. ರಾಹುಲ್ ಗಾಂಧಿ ದೇಶಾದ್ಯಂತ ಸುತ್ತುತ್ತಿದ್ದಾರೆ ಎಂದು ಹೇಳಿದ ಅವರು, ನೀವೆಲ್ಲ ಸೇರಿ ಅತಿ ಹೆಚ್ಚು ಮತಗಳನ್ನು ತಂದು ಕೊಡಬೇಕಾಗಿದೆ. ನಾವು ಸೋಲುವುದಿಲ್ಲ ಎಂಬ ಭರವಸೆ ನಮ್ಮಲ್ಲಿರಬೇಕು. ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಐದು ಗ್ಯಾರಂಟಿಗಳನ್ನು ನೀಡಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾತ್ರ. ಇದರ ಜೊತೆಗೆ ಐತಿಹಾಸಿಕ ಬಜೆಟ್ ಕೊಟ್ಟಿದ್ದೇವೆ. ಆದರೆ ಬಿಜೆಪಿಯವರು ಬಜೆಟ್ ಅಧಿವೇಶನದಲ್ಲಿ ಪ್ರತಿಭಟನೆ ಮಾಡಿ ಅವಹೇಳನ ಮಾಡಿದ್ದಾರೆ. 30 ವರ್ಷಗಳ ನನ್ನ ರಾಜಕಾರಣದಲ್ಲಿ ಬಜೆಟನ್ನು ವಿರೋಧ ಪಕ್ಷ ವಿರೋಧಿಸಿ ಸಭಾತ್ಯಾಗ ಮಾಡಿದ್ದು ನೋಡಿಲ್ಲ. ಬಿಜೆಪಿ- ಜೆಡಿಎಸ್ ಏನೇ ತಿಪ್ಪರಲಾಗ ಹಾಕಿದರೂ ಏನೂ ಆಗಲ್ಲ. ಮುಂದಿನ ಸಲವೂ ಕಾಂಗ್ರೆಸ್ಸೇ ಗೆಲ್ಲಲಿದೆ ಎಂಬುದನ್ನು ಬರೆದಿಟ್ಟುಕೊಳ್ಳಿ ಎಂದು ಡಿಕೆ ಶಿವಕುಮಾರ್ ಹೇಳಿದರು.
20 MP seats is for sure from Karnataka says DK Shivakumar in Mangalore addressing the congress rally held at Adyar. Jds has joined bjp with the afraid of Congress.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm