ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm