ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm