ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.
ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm