ಬ್ರೇಕಿಂಗ್ ನ್ಯೂಸ್
19-02-24 09:38 pm Mangalore Correspondent ಕರಾವಳಿ
ಮಂಗಳೂರು, ಫೆ.19: ಶಾಲೆಗಳ ಮೂಲಕ ಮನೆಗಳನ್ನು ಸಂಪರ್ಕಿಸಿ ಶಿಕ್ಷಕರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ರಾಮನ ಬಗ್ಗೆ ಅವಹೇಳನ ಮಾಡಿರುವ ಶಿಕ್ಷಕಿ ಮತಾಂತರದ ಉದ್ದೇಶ ಹೊಂದಿದ್ದಾರೆ. ಆಕೆಯ ವಿರುದ್ಧ ಪೊಲೀಸರು ಕೂಡಲೇ ಎಫ್ಐಆರ್ ದಾಖಲು ಮಾಡಬೇಕು ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಆರೋಪಿಸಿದ್ದಾರೆ.
ಜಿರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮ ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಗರ ಕ್ಲಾಕ್ ಟವರ್ ನಲ್ಲಿ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಕಾಂಗ್ರೆಸ್ ಸರಕಾರ ದಂಗಲ್ ಎಬ್ಬಿಸಲು ನೋಡುತ್ತಿದೆ. ಇದು ಜಾತಿ, ಧರ್ಮದ ದಂಗಲ್ ಅಲ್ಲ. ಕಾಂಗ್ರೆಸ್ ದಂಗಲ್ ಆಗಿದ್ದು, ಪೊಲೀಸರು ಸರಕಾರದ ಪರ ನಿಂತರೆ ಮುಂದೆ ಕಂಗಾಲು ಆಗಬೇಕಾಗುತ್ತದೆ. ಯಾಕಂದ್ರೆ, ಶಿಕ್ಷಕಿ ವಿರುದ್ಧ ಕ್ರಮ ಜರುಗಿಸದಿದ್ದರೆ ನಾವು ಈ ಪ್ರತಿಭಟನೆಯನ್ನು ಇಡೀ ರಾಜ್ಯಕ್ಕೆ ಹಬ್ಬಿಸುತ್ತೇವೆ ಎಂದರು.



ಹಿಂದುಗಳು ಯಾವತ್ತೂ ಇತರ ಧರ್ಮೀಯರನ್ನು ಅವಹೇಳನ ಮಾಡಲ್ಲ. ಇವರು ಆ ರೀತಿ ಮಾಡಲು ಮುಂದಾದರೆ ನಾವು ಸುಮ್ಮನೆ ಇರೋದಿಲ್ಲ. ಶಾಸಕರ ಮೇಲೆ ಎಫ್ಐಆರ್ ದಾಖಲಿಸಿರುವುದು ಮಂಗಳೂರಿನ ಮತದಾರರ ಮೇಲೆ ಕ್ರಮ ಜರುಗಿಸಿದಂತೆ. ಜನರಿಂದ ಆಯ್ಕೆಯಾದ ವ್ಯಕ್ತಿ ಪೋಷಕರ ಕರೆಗೆ ಓಗೊಟ್ಟು ಅವರ ಪರವಾಗಿ ನಿಂತಿದ್ದಕ್ಕೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹ ಮಾಡಿದರು. ಪ್ರತಿಭಟನೆಯಲ್ಲಿ ರವಿಶಂಕರ ಮಿಜಾರ್, ವಿಜಯಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ರಾಜಗೋಪಾಲ್ ರೈ ಮತ್ತಿತರರಿದ್ದರು.
ಪ್ರತಿಭಟನೆ ಕೊನೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಹೊಯ್ದಾಟ ನಡೆಯಿತು. ಕಾರ್ಯಕರ್ತರು ಧಿಕ್ಕಾರ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದರೆ, ರಸ್ತೆಗೆ ಬರದಂತೆ ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಒಂದಷ್ಟು ಹೊತ್ತು ವಾಗ್ವಾದ, ಮಾತಿನ ಚಕಮಕಿ ನಡೆಯಿತು.
Mangalore Gerosa School Controversy, BJP Holds protest demanding action against sister Prabha.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am