ಬ್ರೇಕಿಂಗ್ ನ್ಯೂಸ್
20-02-24 10:16 am Mangalore Correspondent ಕರಾವಳಿ
ಮಂಗಳೂರು, ಫೆ.20: ಸಂತ ಜೆರೊಸಾ ಶಾಲೆಯಲ್ಲಿ ಹಿಂದು ಧರ್ಮ ಅವಹೇಳನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಮಾಡಲಾಗಿದೆ. ಈ ಬಗ್ಗೆ ಪೋಷಕಿ ಮಂಗಳೂರಿನ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ಜೆರೊಸಾ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣಕ್ಕೆ ಶಿಕ್ಷಕಿಯೂ ಆಗಿರುವ ಪೋಷಕಿ ಕವಿತಾ ಅವರನ್ನು ತಾವು ಕೆಲಸ ಮಾಡುತ್ತಿದ್ದ ಶಾಲೆಯಿಂದ ಕಿತ್ತು ಹಾಕಲಾಗಿದೆ. ತೊಕ್ಕೊಟ್ಟಿನ ಹೋಲಿ ಏಂಜಲ್ ಪ್ರಾಥಮಿಕ ಶಾಲೆಯಲ್ಲಿ ಕವಿತಾ ಶಿಕ್ಷಕಿಯಾಗಿದ್ದರು. ಕವಿತಾ ಅವರು ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿದ್ದು ಮಗಳು ಸಂತ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ. ರಾಮನ ಬಗ್ಗೆ ಅವಹೇಳನಗೈದ ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಳು.
ಘಟನೆಯ ಬಳಿಕ ಫೆ.10 ರಂದು ಹಿಂದು ಸಂಘಟನೆಗಳ ಜೊತೆಗೆ ಡಿಡಿಪಿಐ ಕಚೇರಿಗೆ ಬಂದಿದ್ದ ಕವಿತಾ, ಹಿಂದು ಧರ್ಮ ಅವಹೇಳನ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದರು. ಈ ವೇಳೆ ಕವಿತಾ ಅವರು ಮಾತನಾಡಿದ್ದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾ ಅವರನ್ನು ಕ್ರೈಸ್ತ ಶಿಕ್ಷಣ ಸಂಸ್ಥೆ ಹೋಲಿ ಎಂಜಲ್ ಶಾಲೆಯ ಆಡಳಿತ ಮಂಡಳಿ ಕಿತ್ತು ಹಾಕಿದೆ. ಹೋಲಿ ಎಂಜಲ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದರು.
ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಹೋಲಿ ಎಂಜಲ್ ಶಾಲೆಯನ್ನು ನಡೆಸುತ್ತಿರುವ ಫಾದರ್ ಹೇಳಿದ್ದಾಗಿ ಕವಿತಾ ತಿಳಿಸಿದ್ದಾರೆ. ಅಲ್ಲದೆ, ಕವಿತಾ ಅವರ ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು ರಾತ್ರಿ ವೇಳೆ ವಾಟ್ಸಪ್ ನಂಬರಿಗೆ ಅಶ್ಲೀಲವಾಗಿ ಆಡಿಯೋ ಮೆಸೇಜ್ ಗಳನ್ನು ಹಾಕುತ್ತಿದ್ದಾರೆ. ಕತಾರ್ ದೇಶದಿಂದ ರಾತ್ರಿ ವೇಳೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಸೋಮವಾರ ರಾತ್ರಿ ದೂರು ನೀಡಿದ್ದಾರೆ.
Mangalore Gerosa school audio viral, teacher of Holy Angel school dismissed, teacher gets threat calls. The school dismissed teacher Kavitha for taking to media against the school as her daughter is studying at Gerosa.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am