ಬ್ರೇಕಿಂಗ್ ನ್ಯೂಸ್
20-02-24 10:16 am Mangalore Correspondent ಕರಾವಳಿ
ಮಂಗಳೂರು, ಫೆ.20: ಸಂತ ಜೆರೊಸಾ ಶಾಲೆಯಲ್ಲಿ ಹಿಂದು ಧರ್ಮ ಅವಹೇಳನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಮಾಡಲಾಗಿದೆ. ಈ ಬಗ್ಗೆ ಪೋಷಕಿ ಮಂಗಳೂರಿನ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ಜೆರೊಸಾ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣಕ್ಕೆ ಶಿಕ್ಷಕಿಯೂ ಆಗಿರುವ ಪೋಷಕಿ ಕವಿತಾ ಅವರನ್ನು ತಾವು ಕೆಲಸ ಮಾಡುತ್ತಿದ್ದ ಶಾಲೆಯಿಂದ ಕಿತ್ತು ಹಾಕಲಾಗಿದೆ. ತೊಕ್ಕೊಟ್ಟಿನ ಹೋಲಿ ಏಂಜಲ್ ಪ್ರಾಥಮಿಕ ಶಾಲೆಯಲ್ಲಿ ಕವಿತಾ ಶಿಕ್ಷಕಿಯಾಗಿದ್ದರು. ಕವಿತಾ ಅವರು ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿದ್ದು ಮಗಳು ಸಂತ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ. ರಾಮನ ಬಗ್ಗೆ ಅವಹೇಳನಗೈದ ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಳು.
ಘಟನೆಯ ಬಳಿಕ ಫೆ.10 ರಂದು ಹಿಂದು ಸಂಘಟನೆಗಳ ಜೊತೆಗೆ ಡಿಡಿಪಿಐ ಕಚೇರಿಗೆ ಬಂದಿದ್ದ ಕವಿತಾ, ಹಿಂದು ಧರ್ಮ ಅವಹೇಳನ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದರು. ಈ ವೇಳೆ ಕವಿತಾ ಅವರು ಮಾತನಾಡಿದ್ದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾ ಅವರನ್ನು ಕ್ರೈಸ್ತ ಶಿಕ್ಷಣ ಸಂಸ್ಥೆ ಹೋಲಿ ಎಂಜಲ್ ಶಾಲೆಯ ಆಡಳಿತ ಮಂಡಳಿ ಕಿತ್ತು ಹಾಕಿದೆ. ಹೋಲಿ ಎಂಜಲ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದರು.
ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಹೋಲಿ ಎಂಜಲ್ ಶಾಲೆಯನ್ನು ನಡೆಸುತ್ತಿರುವ ಫಾದರ್ ಹೇಳಿದ್ದಾಗಿ ಕವಿತಾ ತಿಳಿಸಿದ್ದಾರೆ. ಅಲ್ಲದೆ, ಕವಿತಾ ಅವರ ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು ರಾತ್ರಿ ವೇಳೆ ವಾಟ್ಸಪ್ ನಂಬರಿಗೆ ಅಶ್ಲೀಲವಾಗಿ ಆಡಿಯೋ ಮೆಸೇಜ್ ಗಳನ್ನು ಹಾಕುತ್ತಿದ್ದಾರೆ. ಕತಾರ್ ದೇಶದಿಂದ ರಾತ್ರಿ ವೇಳೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಸೋಮವಾರ ರಾತ್ರಿ ದೂರು ನೀಡಿದ್ದಾರೆ.
Mangalore Gerosa school audio viral, teacher of Holy Angel school dismissed, teacher gets threat calls. The school dismissed teacher Kavitha for taking to media against the school as her daughter is studying at Gerosa.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm