ಬ್ರೇಕಿಂಗ್ ನ್ಯೂಸ್
20-02-24 03:19 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಕೋಟೆಕಾರು ಬಳಿಯ ಮಾಡೂರಿನ ಪಿಜಿಯೊಂದರಲ್ಲಿದ್ದು ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ವಿದ್ಯಾರ್ಥಿನಿ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ಮೂಲದ ಚೈತ್ರಾ ಹೆಬ್ಬಾರ್(27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಸ್ನೇಹಿತೆಯರೊಂದಿಗೆ ಚೈತ್ರಾ ನೆಲೆಸಿದ್ದಳು.
ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಕದ್ರಿಯಲ್ಲಿ ನೆಲೆಸಿರುವ ದೊಡ್ಡಪ್ಪನ ಆಶ್ರಯದಲ್ಲಿದ್ದು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17 ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.
ಚೈತ್ರಾ ನೆಲೆಸಿದ್ದ ಪಿಜಿಗೆ ಪುತ್ತೂರಿನ ಮುಸ್ಲಿಂ ಯುವಕನೋರ್ವ ಪದೇ ಪದೇ ಬರುತ್ತಿದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಆರೋಪಿಸಿ ಹಿಂದು ಸಂಘಟನೆಗಳ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿಷಯ ತಿಳಿದ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಅವರು ವಾರದ ಹಿಂದೆ ಚೈತ್ರಾಳ ದೊಡ್ಡಪ್ಪನಿಗೆ ಮಾಹಿತಿ ನೀಡಿದ್ದರು. ಫೆ.17 ರಂದು ಚೈತ್ರಾ ನಾಪತ್ತೆಯಾದ ವಿಚಾರ ತಿಳಿದ ದೊಡ್ಡಪ್ಪ ಮರುದಿನ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ, ಎಲ್ಲಿ ಹೋಗಿದ್ದಾಳೆಂದು ಗೊತ್ತಾಗಿಲ್ಲ. ಬಜರಂಗದಳ ಪ್ರಮುಖರು ಪುತ್ತೂರಿನ ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
Chaitra Hebbar, a 27-year-old Puttur native and PHD student, goes missing from Mangalore. She was pursuing a thesis in food security and living at a local PG in Derlakatte. It has been stated that she fled with her Muslim friend. Ullal police are currently investigating the case.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm