ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm