ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm