ಬ್ರೇಕಿಂಗ್ ನ್ಯೂಸ್
21-02-24 08:24 pm Mangalore Correspondent ಕರಾವಳಿ
ಮಂಗಳೂರು, ಫೆ.21: ವಿಧಾನಸಭೆ ಅಧಿವೇಶನದಲ್ಲಿ ಪಬ್ ದಾಳಿ ಮಾಡಿದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮಂಗಳೂರಿನ ಬಜರಂಗದಳ ಮುಖಂಡರು ತಿರುಗಿ ಬಿದ್ದಿದ್ದಾರೆ.
ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ಧ ಧ್ವನಿ ಎತ್ತುವ ಸಂದರ್ಭದಲ್ಲಿ ಹಳೆಯ ಘಟನೆಯನ್ನು ಮೆಲುಕು ಹಾಕಿದ್ದಾರೆ. ಮಂಗಳೂರಿನಲ್ಲಿ ಪಬ್ ದಾಳಿಯಾದ ಸಂದರ್ಭ ರಾಜ್ಯದ ಗೃಹ ಸಚಿವನಾಗಿದ್ದೆ. ಅಧಿವೇಶನದಲ್ಲಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಗದ್ದಲ ಎಬ್ಬಿಸಿದ್ದರು. ಆಗ ತುಂಬ ಒತ್ತಡ, ಫೋನ್ ಕರೆಗಳು ಬಂದರೂ ಮಣಿಯದೇ ಪಬ್ ದಾಳಿ ಮಾಡಿದ್ದ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಅದೇ ರೀತಿ ನೀವು ಕೂಡ ಯಾವುದೇ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಅಶೋಕ್ ಅವರು ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ.
ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಈ ಬಗ್ಗೆ ಫೇಸ್ಬುಕ್ ನಲ್ಲಿ ಬರೆದಿದ್ದು ನೀವು ಮಂಗಳೂರಿಗೆ ಬಂದಾಗ ನೋಡಿಕೊಳ್ಳುತ್ತೇವೆ ಎಂದು ಅಶೋಕ್ ಗೆ ಬೆದರಿಕೆ ಹಾಕಿದ್ದಾರೆ. ಪುನೀತ್ ಹಾಕಿರುವ ಪೋಸ್ಟ್ ಈ ರೀತಿ ಇದೆ. "ನೀವು ಆರ್ ಅಶೋಕ್ ಅಲ್ಲ.. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ..!! ನಿಮ್ಮ ನಾಲಗೆಯನ್ನು ನಾಲಗೆ ರೀತಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ... ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ... ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ.. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ..
ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ...!! ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ.. ಒಂದೋ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ, ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಬರೆದಿದ್ದಾರೆ. ಈ ರೀತಿಯ ಪೋಸ್ಟ್ ಗೆ ಪರ- ವಿರೋಧ ವ್ಯಕ್ತವಾಗಿದ್ದು ಚರ್ಚೆ ನಡೆದಿದೆ.
Mangalore Bajrang dal leader Puneeth Attavar slams BJP R Ashok over pub attack says we will look after you when you come to Mangalore. Ashok while speaking in the Assembly said 'Pub Attackers' Bajrang dal, this statement has made members of Bajrang dal go angry.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm