ಬ್ರೇಕಿಂಗ್ ನ್ಯೂಸ್
22-02-24 01:08 pm Mangalore Correspondent ಕರಾವಳಿ
ಮಂಗಳೂರು, ಫೆ.22: ರಾಜ್ಯದ ಕರಾವಳಿಯ ಸಮುದ್ರ ವ್ಯಾಪ್ತಿಯಲ್ಲಿ ಚೀನಾ ಮೂಲದ ಬೋಟ್ ಪತ್ತೆಯಾಗಿದ್ದು, ಮಂಗಳೂರಿನ ಮೀನುಗಾರರು ಅದರ ಫೋಟೊ, ವಿಡಿಯೋ ಸೆರೆಹಿಡಿದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
BVKV5 ಹೆಸರಿನ ಬೋಟ್ ಇದಾಗಿದ್ದು, ಚೀನಾದ ಕೆಂಪು ಬಾವುಟವನ್ನು ಹಾರಿಸಿಕೊಂಡಿದೆ. ಬೋಟ್ ನೋಡಿದ ಮಂಗಳೂರಿನ ಮೀನುಗಾರರು ಚೀನಾ ಬೋಟ್ ಎಂಬ ಶಂಕೆಯಲ್ಲಿ ಫೋಟೋ ಸೆರೆಹಿಡಿದಿದ್ದಾರೆ. ಅಲ್ಲದೆ, ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪೊಲೀಸ್ ಪಡೆಯ ಗಮನಕ್ಕೆ ತಂದಿದ್ದಾರೆ. ಮೀನುಗಾರರ ಮಾಹಿತಿ ಪ್ರಕಾರ, ಇದನ್ನು ಕುಮಟಾದಿಂದ ಅಂದಾಜು 200 ಕಿಮೀ ದೂರದ ಆಳ ಸಮುದ್ರದಲ್ಲಿ ಸೆರೆಹಿಡಿಯಲಾಗಿದೆ. ಚೀನಾ ಬೋಟಿನವರು ರಾತ್ರಿ ವೇಳೆ ನಿಷೇಧಿತ ಲೈಟ್ ಫಿಶಿಂಗನ್ನೂ ನಡೆಸುತ್ತಿದ್ದರು ಎಂದವರು ತಿಳಿಸಿದ್ದಾರೆ. ಈ ವಿಡಿಯೋವನ್ನು ಮೂರು ದಿನಗಳ ಹಿಂದೆ ತೆಗೆದಿದ್ದಾರೆ ಎನ್ನಲಾಗಿದೆ.
ಬೋಟ್ ಬಗ್ಗೆ ಇಂಟೆಲಿಜೆನ್ಸ್ ಮೂಲಕ ಮಾಹಿತಿ ಪಡೆದಾಗ, ಅದು ಚೀನಾದ್ದೇ ಬೋಟ್ ಎಂದು ಖಾತರಿಯಾಗಿದೆ. ಚೀನಾದ ಫುಝು ಎನ್ನುವ ಹೆಸರಿನ ಬಂದರಿನಲ್ಲಿ ಬೋಟ್ ರಿಜಿಸ್ಟರ್ ಆಗಿದ್ದು, 25 ಮಂದಿಯಷ್ಟು ಸಿಬಂದಿ ಇದ್ದಾರೆ. ಬೋಟಿನ ಫ್ಲಾಗ್ ಚೀನಾದ್ದೇ ಎಂದು ಖಚಿತಪಡಿಸಲಾಗಿದೆ. ಬೋಟ್ ಫು ಯುವಾನ್ ಯು 676 ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ.
ಭಾರತ ಜಲಪ್ರದೇಶಕ್ಕೆ ಅತಿಕ್ರಮಣ
ಸಾಮಾನ್ಯವಾಗಿ ಹೊರದೇಶದ ಯಾವುದೇ ಬೋಟುಗಳಿಗೆ ಭಾರತೀಯ ಜಲಪ್ರದೇಶ ವ್ಯಾಪ್ತಿಯ ತೀರದಿಂದ 200 ಕಿಮೀ ಒಳಗೆ ಬರಲು ಅವಕಾಶ ಇರುವುದಿಲ್ಲ. ಅದರಲ್ಲೂ ಶತ್ರು ರಾಷ್ಟ್ರ ಚೀನಾದ ಬೋಟ್ ಸೇನೆಯ ಕಣ್ಣು ತಪ್ಪಿಸಿ ಭಾರತದ ಸಮುದ್ರ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ದೇಶದ ಭದ್ರತೆಗೆ ಸವಾಲಾಗಿದೆ. ಕಾರವಾರದಲ್ಲಿ ನೌಕಾಪಡೆಯ ಸೀಬರ್ಡ್ ನೆಲೆ ಇರುವುದರಿಂದ ಅದರ ಪರಿಸರದಲ್ಲಿಯೇ ಈ ಬೋಟ್ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಚೀನಾ ಈ ಬೋಟ್ ಮೂಲಕ ಗೂಢಚಾರಿಕೆ ನಡೆಸುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಅಲರ್ಟ್ ಆಗಿದ್ದು, ಹುಡುಕಾಟದಲ್ಲಿ ತೊಡಗಿದೆ.
ತನಿಖೆಗಿಳಿದ ಕರಾವಳಿ ಪೊಲೀಸ್ ಪಡೆ
ಚೀನಾ ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕರಾವಳಿ ಪೊಲೀಸ್ ಪಡೆ ಎಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ. ಮೀನುಗಾರರಿಂದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕುಮಟಾದಿಂದ ತೆರಳಿದ್ದ ಬೋಟಿನಲ್ಲಿದ್ದ ಮಂಗಳೂರು ಮೂಲದ ಮೀನುಗಾರರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನುವ ಮಾಹಿತಿಯಿದೆ. ತನಿಖೆಗೆ ಹೊನ್ನಾವರ ಕರಾವಳಿ ಪೊಲೀಸ್ ಪಡೆ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನೇಮಿಸಲಾಗಿದೆ.
China baot BVKV5 with flag found near Kumta near Honnavar over illegal fishing, coastal police on high alert. Honnavar coastal Inspector Victor Simon is now investigating the case of China illegal boat.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm