ಬ್ರೇಕಿಂಗ್ ನ್ಯೂಸ್
22-02-24 01:08 pm Mangalore Correspondent ಕರಾವಳಿ
ಮಂಗಳೂರು, ಫೆ.22: ರಾಜ್ಯದ ಕರಾವಳಿಯ ಸಮುದ್ರ ವ್ಯಾಪ್ತಿಯಲ್ಲಿ ಚೀನಾ ಮೂಲದ ಬೋಟ್ ಪತ್ತೆಯಾಗಿದ್ದು, ಮಂಗಳೂರಿನ ಮೀನುಗಾರರು ಅದರ ಫೋಟೊ, ವಿಡಿಯೋ ಸೆರೆಹಿಡಿದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
BVKV5 ಹೆಸರಿನ ಬೋಟ್ ಇದಾಗಿದ್ದು, ಚೀನಾದ ಕೆಂಪು ಬಾವುಟವನ್ನು ಹಾರಿಸಿಕೊಂಡಿದೆ. ಬೋಟ್ ನೋಡಿದ ಮಂಗಳೂರಿನ ಮೀನುಗಾರರು ಚೀನಾ ಬೋಟ್ ಎಂಬ ಶಂಕೆಯಲ್ಲಿ ಫೋಟೋ ಸೆರೆಹಿಡಿದಿದ್ದಾರೆ. ಅಲ್ಲದೆ, ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪೊಲೀಸ್ ಪಡೆಯ ಗಮನಕ್ಕೆ ತಂದಿದ್ದಾರೆ. ಮೀನುಗಾರರ ಮಾಹಿತಿ ಪ್ರಕಾರ, ಇದನ್ನು ಕುಮಟಾದಿಂದ ಅಂದಾಜು 200 ಕಿಮೀ ದೂರದ ಆಳ ಸಮುದ್ರದಲ್ಲಿ ಸೆರೆಹಿಡಿಯಲಾಗಿದೆ. ಚೀನಾ ಬೋಟಿನವರು ರಾತ್ರಿ ವೇಳೆ ನಿಷೇಧಿತ ಲೈಟ್ ಫಿಶಿಂಗನ್ನೂ ನಡೆಸುತ್ತಿದ್ದರು ಎಂದವರು ತಿಳಿಸಿದ್ದಾರೆ. ಈ ವಿಡಿಯೋವನ್ನು ಮೂರು ದಿನಗಳ ಹಿಂದೆ ತೆಗೆದಿದ್ದಾರೆ ಎನ್ನಲಾಗಿದೆ.

ಬೋಟ್ ಬಗ್ಗೆ ಇಂಟೆಲಿಜೆನ್ಸ್ ಮೂಲಕ ಮಾಹಿತಿ ಪಡೆದಾಗ, ಅದು ಚೀನಾದ್ದೇ ಬೋಟ್ ಎಂದು ಖಾತರಿಯಾಗಿದೆ. ಚೀನಾದ ಫುಝು ಎನ್ನುವ ಹೆಸರಿನ ಬಂದರಿನಲ್ಲಿ ಬೋಟ್ ರಿಜಿಸ್ಟರ್ ಆಗಿದ್ದು, 25 ಮಂದಿಯಷ್ಟು ಸಿಬಂದಿ ಇದ್ದಾರೆ. ಬೋಟಿನ ಫ್ಲಾಗ್ ಚೀನಾದ್ದೇ ಎಂದು ಖಚಿತಪಡಿಸಲಾಗಿದೆ. ಬೋಟ್ ಫು ಯುವಾನ್ ಯು 676 ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ.
ಭಾರತ ಜಲಪ್ರದೇಶಕ್ಕೆ ಅತಿಕ್ರಮಣ
ಸಾಮಾನ್ಯವಾಗಿ ಹೊರದೇಶದ ಯಾವುದೇ ಬೋಟುಗಳಿಗೆ ಭಾರತೀಯ ಜಲಪ್ರದೇಶ ವ್ಯಾಪ್ತಿಯ ತೀರದಿಂದ 200 ಕಿಮೀ ಒಳಗೆ ಬರಲು ಅವಕಾಶ ಇರುವುದಿಲ್ಲ. ಅದರಲ್ಲೂ ಶತ್ರು ರಾಷ್ಟ್ರ ಚೀನಾದ ಬೋಟ್ ಸೇನೆಯ ಕಣ್ಣು ತಪ್ಪಿಸಿ ಭಾರತದ ಸಮುದ್ರ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ದೇಶದ ಭದ್ರತೆಗೆ ಸವಾಲಾಗಿದೆ. ಕಾರವಾರದಲ್ಲಿ ನೌಕಾಪಡೆಯ ಸೀಬರ್ಡ್ ನೆಲೆ ಇರುವುದರಿಂದ ಅದರ ಪರಿಸರದಲ್ಲಿಯೇ ಈ ಬೋಟ್ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಚೀನಾ ಈ ಬೋಟ್ ಮೂಲಕ ಗೂಢಚಾರಿಕೆ ನಡೆಸುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಅಲರ್ಟ್ ಆಗಿದ್ದು, ಹುಡುಕಾಟದಲ್ಲಿ ತೊಡಗಿದೆ.
ತನಿಖೆಗಿಳಿದ ಕರಾವಳಿ ಪೊಲೀಸ್ ಪಡೆ
ಚೀನಾ ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕರಾವಳಿ ಪೊಲೀಸ್ ಪಡೆ ಎಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ. ಮೀನುಗಾರರಿಂದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕುಮಟಾದಿಂದ ತೆರಳಿದ್ದ ಬೋಟಿನಲ್ಲಿದ್ದ ಮಂಗಳೂರು ಮೂಲದ ಮೀನುಗಾರರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನುವ ಮಾಹಿತಿಯಿದೆ. ತನಿಖೆಗೆ ಹೊನ್ನಾವರ ಕರಾವಳಿ ಪೊಲೀಸ್ ಪಡೆ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನೇಮಿಸಲಾಗಿದೆ.
China baot BVKV5 with flag found near Kumta near Honnavar over illegal fishing, coastal police on high alert. Honnavar coastal Inspector Victor Simon is now investigating the case of China illegal boat.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm