ಬ್ರೇಕಿಂಗ್ ನ್ಯೂಸ್
22-02-24 01:08 pm Mangalore Correspondent ಕರಾವಳಿ
ಮಂಗಳೂರು, ಫೆ.22: ರಾಜ್ಯದ ಕರಾವಳಿಯ ಸಮುದ್ರ ವ್ಯಾಪ್ತಿಯಲ್ಲಿ ಚೀನಾ ಮೂಲದ ಬೋಟ್ ಪತ್ತೆಯಾಗಿದ್ದು, ಮಂಗಳೂರಿನ ಮೀನುಗಾರರು ಅದರ ಫೋಟೊ, ವಿಡಿಯೋ ಸೆರೆಹಿಡಿದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
BVKV5 ಹೆಸರಿನ ಬೋಟ್ ಇದಾಗಿದ್ದು, ಚೀನಾದ ಕೆಂಪು ಬಾವುಟವನ್ನು ಹಾರಿಸಿಕೊಂಡಿದೆ. ಬೋಟ್ ನೋಡಿದ ಮಂಗಳೂರಿನ ಮೀನುಗಾರರು ಚೀನಾ ಬೋಟ್ ಎಂಬ ಶಂಕೆಯಲ್ಲಿ ಫೋಟೋ ಸೆರೆಹಿಡಿದಿದ್ದಾರೆ. ಅಲ್ಲದೆ, ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪೊಲೀಸ್ ಪಡೆಯ ಗಮನಕ್ಕೆ ತಂದಿದ್ದಾರೆ. ಮೀನುಗಾರರ ಮಾಹಿತಿ ಪ್ರಕಾರ, ಇದನ್ನು ಕುಮಟಾದಿಂದ ಅಂದಾಜು 200 ಕಿಮೀ ದೂರದ ಆಳ ಸಮುದ್ರದಲ್ಲಿ ಸೆರೆಹಿಡಿಯಲಾಗಿದೆ. ಚೀನಾ ಬೋಟಿನವರು ರಾತ್ರಿ ವೇಳೆ ನಿಷೇಧಿತ ಲೈಟ್ ಫಿಶಿಂಗನ್ನೂ ನಡೆಸುತ್ತಿದ್ದರು ಎಂದವರು ತಿಳಿಸಿದ್ದಾರೆ. ಈ ವಿಡಿಯೋವನ್ನು ಮೂರು ದಿನಗಳ ಹಿಂದೆ ತೆಗೆದಿದ್ದಾರೆ ಎನ್ನಲಾಗಿದೆ.

ಬೋಟ್ ಬಗ್ಗೆ ಇಂಟೆಲಿಜೆನ್ಸ್ ಮೂಲಕ ಮಾಹಿತಿ ಪಡೆದಾಗ, ಅದು ಚೀನಾದ್ದೇ ಬೋಟ್ ಎಂದು ಖಾತರಿಯಾಗಿದೆ. ಚೀನಾದ ಫುಝು ಎನ್ನುವ ಹೆಸರಿನ ಬಂದರಿನಲ್ಲಿ ಬೋಟ್ ರಿಜಿಸ್ಟರ್ ಆಗಿದ್ದು, 25 ಮಂದಿಯಷ್ಟು ಸಿಬಂದಿ ಇದ್ದಾರೆ. ಬೋಟಿನ ಫ್ಲಾಗ್ ಚೀನಾದ್ದೇ ಎಂದು ಖಚಿತಪಡಿಸಲಾಗಿದೆ. ಬೋಟ್ ಫು ಯುವಾನ್ ಯು 676 ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ.
ಭಾರತ ಜಲಪ್ರದೇಶಕ್ಕೆ ಅತಿಕ್ರಮಣ
ಸಾಮಾನ್ಯವಾಗಿ ಹೊರದೇಶದ ಯಾವುದೇ ಬೋಟುಗಳಿಗೆ ಭಾರತೀಯ ಜಲಪ್ರದೇಶ ವ್ಯಾಪ್ತಿಯ ತೀರದಿಂದ 200 ಕಿಮೀ ಒಳಗೆ ಬರಲು ಅವಕಾಶ ಇರುವುದಿಲ್ಲ. ಅದರಲ್ಲೂ ಶತ್ರು ರಾಷ್ಟ್ರ ಚೀನಾದ ಬೋಟ್ ಸೇನೆಯ ಕಣ್ಣು ತಪ್ಪಿಸಿ ಭಾರತದ ಸಮುದ್ರ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ದೇಶದ ಭದ್ರತೆಗೆ ಸವಾಲಾಗಿದೆ. ಕಾರವಾರದಲ್ಲಿ ನೌಕಾಪಡೆಯ ಸೀಬರ್ಡ್ ನೆಲೆ ಇರುವುದರಿಂದ ಅದರ ಪರಿಸರದಲ್ಲಿಯೇ ಈ ಬೋಟ್ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಚೀನಾ ಈ ಬೋಟ್ ಮೂಲಕ ಗೂಢಚಾರಿಕೆ ನಡೆಸುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಅಲರ್ಟ್ ಆಗಿದ್ದು, ಹುಡುಕಾಟದಲ್ಲಿ ತೊಡಗಿದೆ.
ತನಿಖೆಗಿಳಿದ ಕರಾವಳಿ ಪೊಲೀಸ್ ಪಡೆ
ಚೀನಾ ಬೋಟ್ ಪತ್ತೆ ಹಿನ್ನೆಲೆಯಲ್ಲಿ ಕರಾವಳಿ ಪೊಲೀಸ್ ಪಡೆ ಎಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ. ಮೀನುಗಾರರಿಂದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕುಮಟಾದಿಂದ ತೆರಳಿದ್ದ ಬೋಟಿನಲ್ಲಿದ್ದ ಮಂಗಳೂರು ಮೂಲದ ಮೀನುಗಾರರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನುವ ಮಾಹಿತಿಯಿದೆ. ತನಿಖೆಗೆ ಹೊನ್ನಾವರ ಕರಾವಳಿ ಪೊಲೀಸ್ ಪಡೆ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನೇಮಿಸಲಾಗಿದೆ.
China baot BVKV5 with flag found near Kumta near Honnavar over illegal fishing, coastal police on high alert. Honnavar coastal Inspector Victor Simon is now investigating the case of China illegal boat.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am