ಬ್ರೇಕಿಂಗ್ ನ್ಯೂಸ್
25-11-20 02:41 pm Mangalore Correspondent ಕರಾವಳಿ
ಮಂಗಳೂರು, ನ.25: ಅತ್ತ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಬೇಕಾದ್ರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳವಾರ ಸದ್ದಿಲ್ಲದೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕೆಲವು ನಾಯಕರೊಂದಿಗೆ ಚರ್ಚಿಸಿ ಹೋಗಿದ್ದಾರೆ.
ಪಕ್ಷದ ನೆಲೆಯಲ್ಲಿ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗುತ್ತಿದೆ. ಸಂತೋಷ್ ಅವರು ಉಡುಪಿಗೆ ಆಗಮಿಸಿದ್ದು, ಅಲ್ಲಿಂದ ಬೆಂಗಳೂರಿಗೆ ಮರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಮಂಗಳೂರು ಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಆದರೆ ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗ ಬಹುದಾದ ಗ್ರಾ.ಪಂ. ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪ್ರಸಕ್ತ ವಿದ್ಯಮಾನಗಳ ಹಿನ್ನಲೆಯಲ್ಲಿ ಸಂತೋಷ್ ಅವರ ಮಂಗಳೂರು ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ.
ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ವೇದವ್ಯಾಸ ಕಾಮತ್, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಾಧ್ಯಮ ವಕ್ತಾರ ಜಗದೀಶ ಶೇಣವ ಅವರು ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಕಚೇರಿಗೆ ಆಗಮಿಸಿ ಸಂತೋಷ್ ಅವರನ್ನು ಭೇಟಿ ಮಾಡಿದರು.
Bjp National General Secretary B L Santosh has made a surprise visit to Mangalore and has held a meeting with the leaders of Dakshina Kannada.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm