ಬ್ರೇಕಿಂಗ್ ನ್ಯೂಸ್
22-02-24 09:17 pm Mangalore Correspondent ಕರಾವಳಿ
ಮಂಗಳೂರು, ಫೆ.22: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನೆನೆಗುದಿಗೆ ಬಿದ್ದಿರುವ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಎಂಟು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಜನಸಾಮಾನ್ಯರು, ವಾಹನ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದಕ್ಕೆ ಪರಿಹಾರ ಇಲ್ಲವೇ ಎಂದು ರಾಜ್ಯ ಸರ್ಕಾರದ ಬಳಿ ಪ್ರಶ್ನೆ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೇಂದ್ರ ಸರಕಾರದ ಕೆಲಸ ಆಗಿರುವುದರಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಲು ಮುಂದಾಗಿದ್ದಾರೆ. ಬಹಳಷ್ಟು ಕಡೆ ರಾಷ್ಟ್ರೀಯ ಹೆದ್ದಾರಿ ಆಗಿದೆ, ನಮ್ಮ ಗದಗದಲ್ಲಿ ಸೂಪರ್ ರಸ್ತೆ ಆಗಿದೆ ಎಂದು ಹೇಳಲು ಹೊರಟಾಗ, ಅಲ್ಲಿ ಆಗದೇ ಇರುವುದನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡಿ ಎಂದು ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದರು.
ಹೆದ್ದಾರಿ ಕೆಲಸ ಆಗಿಲ್ಲಾಂದ್ರೆ, ಅಲ್ಲಿ ಭೂಸ್ವಾಧೀನ ಆಗಿರಲಿಕ್ಕಿಲ್ಲ. ಅದು ಮಾಡೋದು ರಾಜ್ಯ ಸರ್ಕಾರ. ಎಸ್ಎಲ್ ಓಗಳನ್ನು ನೇಮಕ ಮಾಡಿದ್ರೆ ಕೆಲಸ ಆಗುತ್ತೆ ಎಂದು ಬೊಮ್ಮಾಯಿ ಹೇಳಿದಾಗ, ಐದು ವರ್ಷಗಳ ಹಿಂದೆಯೇ ಭೂಸ್ವಾಧೀನ ಎಲ್ಲ ಮುಗಿದಿದೆ, ಕೆಲಸ ಮಾತ್ರ ಬಾಕಿ ಇದೆ. ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಗೂ ರಸ್ತೆಯ ದುಸ್ಥಿತಿ ಗೊತ್ತಿದೆ. ಅರೆಬರೆ ಕಾಮಗಾರಿಯಷ್ಟೇ ಆಗಿದೆ, ಅದನ್ನು ನೋಡಿದ್ರೆ ಇನ್ನೂ ನಾಲ್ಕೈದು ವರ್ಷ ಅಲ್ಲಿ ಕೆಲಸ ಆಗಲಿಕ್ಕಿಲ್ಲ ಅನ್ಸತ್ತೆ. ಯಾಕೆ ಕೆಲಸ ವೇಗ ಪಡೀತಾ ಇಲ್ಲ ಎನ್ನೋದು ನಮ್ಮ ಪ್ರಶ್ನೆ ಎಂದರು.
ಅಲ್ಲಿ ಯಾವುದೋ ಕಾರಣಕ್ಕೆ ಕೆಲಸ ಬಾಕಿ ಇರಬಹುದು. ಇತರ ಎಲ್ಲ ಕಡೆ ರಾಷ್ಟ್ರೀಯ ಹೆದ್ದಾರಿ ಕೆಲಸ ವೇಗವಾಗಿಯೇ ಆಗ್ತಾ ಇದೆ. ಕೇಂದ್ರ ಸರಕಾರ ಸಾವಿರಾರು ಕೋಟಿ ಅನುದಾನ ಕೊಟ್ಟಿದೆ, ರೈಲ್ವೇಗಾಗಿಯೇ ರಾಜ್ಯಕ್ಕೆ ಏಳು ಸಾವಿರ ಕೋಟಿ ಕೊಟ್ಟಿದೆ ಎಂದು ಹೇಳಿದರು. ಬೇರೆಲ್ಲ ಕಡೆ ಆಗಿರಬಹುದು, ನಮ್ಮ ಮಂಗಳೂರು- ಬೆಂಗಳೂರಿನ ರಸ್ತೆಯಲ್ಲಿ ಮಂಗಳೂರಿನ ಬಂಟ್ವಾಳದಿಂದ ಹಿಡಿದು ಶಿರಾಡಿ ಘಾಟ್ ವರೆಗಷ್ಟೇ ಕೆಲಸ ಆಮೆಗತಿಯಲ್ಲಿರೋದು. ಅದನ್ನು ಶೀಘ್ರದಲ್ಲೇ ಮಾಡಿಸಬೇಕು ಎಂದು ಅಶೋಕ್ ರೈ ಆಗ್ರಹಿಸಿದರು.
ಬಿಸಿ ರೋಡ್ ನಿಂದ ಗುಂಡ್ಯದ ವರೆಗಿನ ರಾಷ್ಟ್ರೀಯ ಹೆದ್ದಾರಿ ಕೆಲಸ ಆಗ್ತಿದ್ದು, ಕುಂಟುತ್ತಾ ಸಾಗಿರುವುದರಿಂದ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಲ್ಲಡ್ಕದಲ್ಲಿ ಮೂರು ಕಿಮೀ ಉದ್ದಕ್ಕೆ ಫ್ಲೈ ಓವರ್ ಮಾಡಿದ್ದು, ಅದರ ಕಾಮಗಾರಿಯೇ ಬಾಕಿಯಾಗಿದೆ. ಅನಗತ್ಯ ಎನಿಸುವಷ್ಟು ಉದ್ದಕ್ಕೆ ಈ ಫ್ಲೈಓವರ್ ಕೆಲಸ ಆಗುತ್ತಿದ್ದು, ಅಂದಾಜು 700 ಕೋಟಿ ಖರ್ಚು ಮಾಡುತ್ತಿದ್ದಾರೆ. ಇದರಿಂದಾಗಿ ಸೇತುವೆ ಕಾಮಗಾರಿ ಭಾರೀ ನಿಧಾನ ಗತಿಯಲ್ಲಿ ಸಾಗುತ್ತಿದೆ.
Puttur Mla Ashok Rai turns angry talking about Mangalore Bangalore highway in Assembly saying how public are facing huge problem travelling in sucha a bad road.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm