R. Ashok, Bajrang dal: ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ, ಅದರಲ್ಲಿ ವಿಷಾದನೂ ಇಲ್ಲ, ನೋವೂ ಇಲ್ಲ ; ಆರ್. ಅಶೋಕ್ ಸ್ಪಷ್ಟನೆ

23-02-24 12:22 pm       Mangalore Correspondent   ಕರಾವಳಿ

ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.

ಮಂಗಳೂರು, ಫೆ.23: ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.

ಜ್ಞಾನವಾಪಿ ದೇವಸ್ಥಾನದ ಬಗ್ಗೆ ರಾಮನಗರದ ವಕೀಲರೊಬ್ಬರು ಅವಹೇಳನಕಾರಿ ಶಬ್ದ ಹಾಕಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ, ನಾನು ಕೂಡ ಗೃಹ ಸಚಿವನಾಗಿದ್ದೆ. ನೀವು ಮುಸ್ಲಿಮರಿಂದ ಒತ್ತಡ ಇದೆಯೆಂದು ಕ್ರಮ ಜರುಗಿಸದೇ ಇರಬಾರದು. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೂ ಗೂಂಡಾ ಕಾಯ್ದೆ ಹಾಕಿದ್ದೆ. ಒತ್ತಡ ಇದೆಯೆಂದು ಸುಮ್ಮನೆ ಬಿಡಲಿಲ್ಲ ಎಂದು ಹೇಳಿದ್ದೆ. ಇದರಿಂದ ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ.

ನಾನು ಕೂಡ ಹತ್ತು ವರ್ಷ ಬಜರಂಗದಳ ಕಾರ್ಯಕರ್ತನಾಗಿದ್ದೆ. ಕ್ಷಮೆ ಕೇಳುವುದರಿಂದ ಯಾವುದೇ ವಿಷಾದನೂ ಇಲ್ಲ, ನೋವೂ ಇಲ್ಲ. ಬಜರಂಗದಳ ಕಾರ್ಯಕರ್ತರೂ ನಮ್ಮವರೇ. ಆದ್ದರಿಂದ ಈ ವಿಚಾರವನ್ನು ಇಲ್ಲಿಗೆ ಮುಕ್ತಾಯ ಮಾಡಿ ಎಂದು ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕಿತ್ತು ಹಾಕಬೇಕೆಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಬಜರಂಗದಳ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದರು. ಅಲ್ಲದೆ, ವಿಶ್ವಹಿಂದು ಪರಿಷತ್, ಬಜರಂಗದಳ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಕ್ರಮಕ್ಕೆ ಆಗ್ರಹಿಸಿದ್ದರು.

Opposition leader of the BJP, R. Sudhakar, has come under fire from Hindu outfits for claiming that he had invoked the Goonda Act on Bajrang Dal activists. Ashok has apologised to Vishwa Hindu Parishad and Bajrang Dal activists.