ಬ್ರೇಕಿಂಗ್ ನ್ಯೂಸ್
23-02-24 12:22 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.
ಜ್ಞಾನವಾಪಿ ದೇವಸ್ಥಾನದ ಬಗ್ಗೆ ರಾಮನಗರದ ವಕೀಲರೊಬ್ಬರು ಅವಹೇಳನಕಾರಿ ಶಬ್ದ ಹಾಕಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ, ನಾನು ಕೂಡ ಗೃಹ ಸಚಿವನಾಗಿದ್ದೆ. ನೀವು ಮುಸ್ಲಿಮರಿಂದ ಒತ್ತಡ ಇದೆಯೆಂದು ಕ್ರಮ ಜರುಗಿಸದೇ ಇರಬಾರದು. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೂ ಗೂಂಡಾ ಕಾಯ್ದೆ ಹಾಕಿದ್ದೆ. ಒತ್ತಡ ಇದೆಯೆಂದು ಸುಮ್ಮನೆ ಬಿಡಲಿಲ್ಲ ಎಂದು ಹೇಳಿದ್ದೆ. ಇದರಿಂದ ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ.
ನಾನು ಕೂಡ ಹತ್ತು ವರ್ಷ ಬಜರಂಗದಳ ಕಾರ್ಯಕರ್ತನಾಗಿದ್ದೆ. ಕ್ಷಮೆ ಕೇಳುವುದರಿಂದ ಯಾವುದೇ ವಿಷಾದನೂ ಇಲ್ಲ, ನೋವೂ ಇಲ್ಲ. ಬಜರಂಗದಳ ಕಾರ್ಯಕರ್ತರೂ ನಮ್ಮವರೇ. ಆದ್ದರಿಂದ ಈ ವಿಚಾರವನ್ನು ಇಲ್ಲಿಗೆ ಮುಕ್ತಾಯ ಮಾಡಿ ಎಂದು ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕಿತ್ತು ಹಾಕಬೇಕೆಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಬಜರಂಗದಳ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದರು. ಅಲ್ಲದೆ, ವಿಶ್ವಹಿಂದು ಪರಿಷತ್, ಬಜರಂಗದಳ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಕ್ರಮಕ್ಕೆ ಆಗ್ರಹಿಸಿದ್ದರು.
Opposition leader of the BJP, R. Sudhakar, has come under fire from Hindu outfits for claiming that he had invoked the Goonda Act on Bajrang Dal activists. Ashok has apologised to Vishwa Hindu Parishad and Bajrang Dal activists.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm