ಬ್ರೇಕಿಂಗ್ ನ್ಯೂಸ್
23-02-24 02:40 pm Mangalore Correspondent ಕರಾವಳಿ
ಉಳ್ಳಾಲ, ಫೆ.23: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನಲೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತವಾಗಿದೆ.


ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.
Dubai Road Accident, Mangalore ullal based 28 year old girl Vidisha killed. She is the daughter of former Mangalore Taluk Panchyath vice President Rajeev. She was working at the dubai airport since 5 years. She was driving her car and later lost control and rammed the divider.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am