ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm