ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm