ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm