ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm