Mangalore Painter Death: ಶಕ್ತಿನಗರ ; ಏಣಿಯಲ್ಲಿ ನಿಂತು ಪೈಂಟ್ ಮಾಡುತ್ತಿದ್ದ ಯುವಕ ಜಾರಿ ಬಿದ್ದು ಸ್ಥಳದಲ್ಲೇ ಸಾವು

26-02-24 01:03 pm       Mangalore Correspondent   ಕರಾವಳಿ

ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.

ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.

ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

26 year old painter dies after falling from ladder at Shakthinagar in Mangalore. The deceased has been identifed as Mohith Poojari.