ಬ್ರೇಕಿಂಗ್ ನ್ಯೂಸ್
26-02-24 07:51 pm Mangalore Correspondent ಕರಾವಳಿ
ಮಂಗಳೂರು, ಫೆ.26: ಕರಾವಳಿಯಲ್ಲಿ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರು ಹೊಂದಿದ್ದಾರೆ. ಆದರೆ ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು ಬಾಸೆಲ್ ಮಿಷನರಿಗಳು. ಕರಾವಳಿಗೆ ಒಂದು ಚಲನೆಯನ್ನು ಕೊಟ್ಟವರು ಮಿಷನರಿಗಳು ಎಂದು ಹಿರಿಯ ಚಿಂತಕ ಪುರುಷೋತ್ತಮ ಬಿಳಿಮಲೆ ಹೇಳಿದರು.
ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಎರಡನೆಯ ದಿನ ನಡೆದ “ ಕರಾವಳಿ ಕಟ್ಟಿದ ಬಗೆ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಾರಂಪರಿಕತೆಯನ್ನು ಸಾರ್ವತ್ರಿಕಗೊಳಿಸಿದ ಕ್ರಾಂತಿ ಕರಾವಳಿಯಲ್ಲಿ ಮಿಷನರಿಗಳು ಮಾಡಿದ್ದಾರೆ. ಈ ಮಿಷನರಿಗಳಿಗೆ ನಾವೆಲ್ಲರೂ ಅಭಾರಿಯಾಗಿರಬೇಕು. ನಮ್ಮಲ್ಲಿರುವ ಮಠಗಳು ಸಾವಿರಾರು ವರ್ಷಗಳ ಹಿಂದಿನದ್ದು ಎಂದು ಹೇಳಲಾಗುತ್ತದೆ. ಆದರೆ ನಮ್ಮ ಕರಾವಳಿಯಲ್ಲಿ ಮೊದಲ ಬಾರಿಗೆ ಮುದ್ರಣಾಲಯವನ್ನು ಈ ಮಠದವರು ಹಾಕಿದ್ದಾರಾ? ಅದಕ್ಕಾಗಿ ಮಿಷನರಿಗಳು ಬರಬೇಕಾಯಿತು. ಈ ನಿಟ್ಟಿನಲ್ಲಿ ನಾವು ಮಿಷನರಿಗಳ ಕೊಡುಗೆಯನ್ನು ಸ್ಮರಿಸಬೇಕು ಎಂದು ಶ್ಲಾಘಿಸಿದರು.
'ನಾನು ಕೋಮುವಾದ ಮಾಡುತ್ತೇನೆ. ಅದರಲ್ಲಿ ತಪ್ಪೇನಿಲ್ಲ, ಅದುವೇ ಸರಿ ಎನ್ನುವವರ ನಡುವೆ ಕೋಮುವಾದ ಮಾಡುವುದು ತಪ್ಪು ಎನ್ನುವ ಒಬ್ಬರು ಇದ್ದರೆ ಸಾಕು ಎಂದ ಬಿಳಿಮಲೆ, ಈ ಹಿಂದೆ ಬ್ರಾಹ್ಮಣರೇನು ಮತಾಂತರ ಆಗುತ್ತಿರಲಿಲ್ಲ. ಮತಾಂತರ ಆದವರು ಎಂಜಲು ತಿನ್ನುತ್ತಿದ್ದವರು, ಭಿಕ್ಷೆ ಬೇಡುತ್ತಿದ್ದವರು. ಆದರೆ ಈಗ ಅವರು ಕೂಡಾ ತಮ್ಮ ಸ್ವಇಚ್ಛೆಯಿಂದ ಮತಾಂತರವಾಗಲು ಸಾಧ್ಯವಾಗದಂತಾಗಿದೆ ಎಂದರು. ಈ ಹಿಂದೆ ಸಮಾಜಕ್ಕೆ ಕೊಡುಗೆ ನೀಡಿದವರು ಎಂದರೆ ಮಂಗಳೂರಿಗರು ಆಗಿದ್ದರು. ಆದರೆ ಈಗ ಯಾವುದೇ ಜಿಲ್ಲೆ, ಪ್ರದೇಶದಲ್ಲಿ ಗಲಾಟೆ, ಗಲಭೆ ನಡೆದರೂ ಆ ಜಿಲ್ಲೆಯನ್ನು "ಮಂಗಳೂರಿನಂತೆ" ಎಂದು ಹೋಲಿಕೆ ಮಾಡಲಾಗುತ್ತದೆ. ಆ ಮಟ್ಟಿಗೆ ನಮ್ಮ ನಗರ ತಲುಪಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಒಂದು ಮೇಲ್ಸೆತುವೆ ನಿರ್ಮಾಣ ಮಾಡಲು ಎರಡು ಬಾರಿ ಗೆದ್ದು ಬಂದ ಎಂಎಲ್ಎಗಳ ನಡುವೆ ನಾವು ಶ್ರೀನಿವಾಸ ಮಲ್ಯರ ಕೊಡುಗೆಯನ್ನು ನೆನೆಯಬೇಕು ಎಂದರು. ಜಾತಕವನ್ನು ಬರೆಯುವಾಗ ಎಂದಿಗೂ ಕೂಡ ಬ್ರಾಹ್ಮಣರೇತರಿಗೆ ವಿದ್ಯೆ ಇಲ್ಲ ಎಂದು ಬರೆಯಲಾಗುತ್ತದೆ. ನನಗೂ ಹಾಗೆಯೇ ಬರೆಯಲಾಗಿತ್ತು. ಆದರೆ ಆ ಜ್ಯೋತಿಷಿ ಬರೆದ ಜಾತಕಕ್ಕೆ ಸಡ್ಡು ಹೊಡೆದವರು ನಮ್ಮ ತಾಯಿ. ನನಗೆ ತನ್ನ ಕಿವಿಯೋಳೆ ಅಡವಿಟ್ಟು ವಿದ್ಯೆ ನೀಡಿದರು. ಇಂದು ನಾನು ಪ್ರೊಫೆಸರ್ ಆಗಿ ಬೆಳೆದಿದ್ದೇನೆ ಎಂದು ತಿಳಿಸಿದರು.
ಕನ್ನಡ ಪರ ಹೋರಾಟಗಾರ ರಮೇಶ್ ಬೆಲ್ಲದಕೊಂಡ ಪ್ರತಿಕ್ರಿಯೆ ನೀಡಿದರು. ವೇದಿಕೆಯಲ್ಲಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಉಪಸ್ಥಿತರಿದ್ದರು. ಜಿಲ್ಲಾ ಮುಖಂಡ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.
Ba Salettur, Govinda Pai and others have played an important role in the history of coastal areas. But when it comes to the question of who built the history of our coast, it is the Basel missionaries who take the first place. Senior thinker Purushothama Bilimale said that it was the missionaries who gave a movement to the coast.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm