ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am