ಬ್ರೇಕಿಂಗ್ ನ್ಯೂಸ್
28-02-24 07:27 pm Udupi Correspondent ಕರಾವಳಿ
ಉಡುಪಿ, ಫೆ.28: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು? ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ಸಂಪರ್ಕ ಯಾರ ಜೊತೆ ಇದೆ? ಅಲ್ಲಿ ಬಂದಿರುವ ಯುವಕರ ಸಂಪರ್ಕ ಯಾರ ಜೊತೆ ಇದೆ? ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿರುವ ಕುರಿತ ಪ್ರಶ್ನೆಗೆ, ಅಡ್ಡ ಮತದಾನ ಮಾಡಿದವರ ಮೇಲೆ ಜನ ಕ್ರಮ ಕೈಗೊಳ್ಳುತ್ತಾರೆ. ಚುನಾವಣಾ ಆಯೋಗ, ಪಕ್ಷ ಕ್ರಮ ಕೈಗೊಳ್ಳುತ್ತದೆ. ಬಿಜೆಪಿಗೆ ಬಂದು ಮಂತ್ರಿಯಾಗಿ ಒಳ್ಳೆಯ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಮತ್ತೆ ಆ ಕಡೆ ತಿರುಗುವ ಮಾನಸಿಕತೆಗೆ ಧಿಕ್ಕಾರ ಇದೆ. ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿ ಸೇರಿದಾಗ ಯಶವಂತಪುರದಲ್ಲಿ ನಾನೇ ನಿಂತು ಚುನಾವಣೆ ಮಾಡಿದ್ದೆ. ಸೋಮಶೇಖರ್ ಮೇಲೆ ಬಿಜೆಪಿ ಕಾರ್ಯಕರ್ತರ ವಿರೋಧವಿದ್ದರೂ ಅವರ ಮನವೊಲಿಸಿದ್ದೆವು. ಎಸ್ಟಿ ಸೋಮಶೇಖರ್ ಅವರು ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು
Union Minister for State for Agriculture and Farmers’ Welfare Shobha Karandlaje has demanded NIA probe into the allegations of raising pro-Pakistan slogans in Karnataka legislature premises.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm