ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm