ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm