ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm