ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm