ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm