ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm