ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm