ಬ್ರೇಕಿಂಗ್ ನ್ಯೂಸ್
02-03-24 08:37 pm Mangalore Correspondent ಕರಾವಳಿ
ಮಂಗಳೂರು, ಮಾ.2: ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿರುವ ಅರುಣ್ ಪುತ್ತಿಲ ಮತ್ತು ಇತರರು ಪಕ್ಷಕ್ಕೆ ಸೇರಲು ಮುಕ್ತ ಆಹ್ವಾನ ನೀಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ತತ್ವ ಸಿದ್ಧಾಂತ ಒಪ್ಪುವ ಪ್ರತಿಯೊಬ್ಬರನ್ನೂ ಬಿಜೆಪಿಗೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸತೀಶ್ ಕುಂಪಲ, ಜಾಲತಾಣದಲ್ಲಿ ಕೆಲವು ಕಡೆ ಅರುಣ್ ಪುತ್ತಿಲ ಸೇರ್ಪಡೆಗೆ ಬಿಜೆಪಿಯಲ್ಲಿಯೇ ವಿರೋಧ ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಪುತ್ತೂರಿನಲ್ಲಿಯೂ ಪಕ್ಷದ ಪ್ರಮುಖರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜ್ಯಾಧ್ಯಕ್ಷರು ಮತ್ತು ಸಂಘಟನಾ ಕಾರ್ಯದರ್ಶಿ ಹಲವು ಬಾರಿ ಮಾತುಕತೆ ನಡೆಸಿದ್ದು ಅವರಿಗೆ ಪಕ್ಷ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಿದ್ದ ಮೇಲೂ ಪಕ್ಷ ಸೇರದೇ ಇರುವುದಕ್ಕೆ ಅವರೇ ಕಾರಣ ಕೊಡಬೇಕು ಎಂದರು.
ಹುದ್ದೆಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಮಾತುಕತೆ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ ಅಥವಾ ಮಂಡಲಾಧ್ಯಕ್ಷ ಹುದ್ದೆಯ ಬಗ್ಗೆ ಅಪೇಕ್ಷೆ ಇಟ್ಟಿದ್ದಾರೆ. ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಷರತ್ತು ಮುಂದಿಟ್ಟು ಪಕ್ಷಕ್ಕೆ ಬರುತ್ತೇನೆ ಎನ್ನುವುದು ಸರಿಯಲ್ಲ. ಪಕ್ಷ ಸೇರಿದ ಬಳಿಕ ಅವರಿಗೆ ತಕ್ಕುದಾದ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಅರುಣ್ ಪುತ್ತಿಲ ಒಬ್ಬ ರಾಷ್ಟ್ರೀಯವಾದಿ. ಮೋದಿ ಪ್ರಧಾನಿಯಾಗಬೇಕೆಂದು ಅವರಲ್ಲೂ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಜಿಲ್ಲೆಯಲ್ಲಿ ಮುನಿಸು ಇರುವವರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಕ್ಷ ಸೇರುವಾಗ ನೇರವಾಗಿ ಬಂದು ಸೇರಿಕೊಳ್ಳಲಿ. ಹುದ್ದೆಯನ್ನು ಆಬಳಿಕ ಪಕ್ಷ ತೀರ್ಮಾನಿಸುತ್ತದೆ ಎಂಬುದನ್ನು ಹೇಳಬಯಸುತ್ತೇನೆ ಎಂದರು.
The BJP said here on Saturday that the door is open for Sangh Parivar activist Arun Kumar Puthila to join the party without imposing any condition. As a rebel (Independent) candidate in the last Assembly elections from Puttur, Mr. Puthila came second, relegating the BJP to third.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm