ಬ್ರೇಕಿಂಗ್ ನ್ಯೂಸ್
02-03-24 10:54 pm Mangalore Correspondent ಕರಾವಳಿ
ಉಳ್ಳಾಲ, ಮಾ.2: ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕ ಕಲ್ಯಾಣಾರ್ಥ ಮಂಗಳೂರು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಇದೇ ಮಾರ್ಚ್ 17 ರಂದು ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಕುತ್ತಾರು ದೆಕ್ಕಾಡಿನ ಕೊರಗಜ್ಜನ ಆದಿ ಸ್ಥಳಕ್ಕೆ " ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಹೆಸರಿನಲ್ಲಿ ನಾಲ್ಕನೇ ವರುಷದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.
ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಕೊರಗಜ್ಜನ ಚರಿತ್ರೆಯು ಕದಿರೆಯಿಂದ ಕುತ್ತಾರಿನ ವರೆಗೆ ಇದ್ದು ಸಾಮಾನ್ಯನಾಗಿದ್ದ ಕೊರಗ ತನಿಯ ತನ್ನ ಸತ್ಯದ ಕಾಯಕದಿಂದ ಶಕ್ತಿರೂಪವಾಗಿ ಅವತರಿಸಿ ಕುತ್ತಾರಿನಲ್ಲಿ ನೆಲೆಸಿದ್ದು ಇದರ ಸಂಕೇತವಾಗಿ ವಿಶ್ವಹಿಂದು ಪರಿಷತ್, ಬಜರಂಗದಳವು ಕಳೆದ ಮೂರು ವರ್ಷಗಳಿಂದ ಕದ್ರಿ ಮಂಜುನಾಥ ಕ್ಷೇತ್ರದಿಂದಲೇ ಕುತ್ತಾರಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕೆಲವೇ ವರುಷಗಳ ಹಿಂದೆ ಜನ ಸಂಚಾರವೇ ಇಲ್ಲದ ಕುತ್ತಾರಿನ ಪ್ರದೇಶದಲ್ಲೀಗ ದೇಶದ ಮೂಲೆ ಮೂಲೆಗಳಿಂದ ಹೊಸ, ಹೊಸ ಜನರು ಬಂದು ಕೊರಗಜ್ಜ ದೈವಕ್ಕೆ ತಲೆಬಾಗಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಹರಕೆ ಹೊತ್ತುಕೊಳ್ಳುತ್ತಿದ್ದು ಕ್ಷೇತ್ರವು ಕಾರಣೀಕ ಸ್ಥಳವಾಗಿ ಬೆಳಗುತ್ತಿದೆ ಎಂದರು.

ದೈವಾರಾಧಕ ರೋಹಿತ್ ಉಳ್ಳಾಲ್ ಮಾತನಾಡಿ "ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಪಾದಯಾತ್ರೆಯು ಮಾ.17ರಂದು ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಬೆಳಗ್ಗೆ 6 ಗಂಟೆಗೆ ಹೊರಟು 9.30 ಗಂಟೆಗೆ ಕುತ್ತಾರು ದೆಕ್ಕಾಡುವಿಗೆ ತಲುಪಿ ಸಮಾರೋಪ ಸಮಾರಂಭ ನಡೆಯಲಿದೆ. ಕೊರಗಜ್ಜನ ಆದಿ ಸ್ಥಳವು ಬೇಡಿದವರ ಇಷ್ಟಾರ್ಥ ನೆರವೇರಿಸುವ ಕಾರಣಿಕ ಕ್ಷೇತ್ರವಾಗಿರುವುದರಿಂದ ಕಳೆದ ಮೂರು ವರುಷಗಳಿಂದಲೂ ಜಿಲ್ಲೆಯ ಎಲ್ಲಾ ಕಡೆಗಳಿಂದ ಸಹಸ್ರಾರು ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಈ ಬಾರಿಯೂ ಅದೇ ರೀತಿ ಭಕ್ತಾದಿಗಳು ಬರಿಗಾಲಿಂದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.
ಕೊರಗತನಿಯ ದೈವದ ಆದಿಸ್ಥಳ ದೆಕ್ಕಾಡು ಕುತ್ತಾರ್ ಇದರ ಟ್ರಸ್ಟಿ ದೇವಿಪ್ರಸಾದ್ ಶೆಟ್ಟಿ, ದೈವ ನರ್ತಕ ಮಾಯಿಲ ದೆಕ್ಕಾಡು, ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಕಾರ್ಯದರ್ಶಿ ಕಿಶನ್ ತಾರಿಪಡ್ಪು, ವಿ.ಹಿಂ.ಪ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರ್, ಯತೀಶ್ ಶೆಟ್ಟಿ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.
Unity of Hindu Samaj, Lok Kalyanartha on March 17, walk to Koragajjana Adi Kshetra" padayatra at Kuttar in Mangalore.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am