ಬ್ರೇಕಿಂಗ್ ನ್ಯೂಸ್
03-03-24 01:46 pm Mangalore Correspondent ಕರಾವಳಿ
ಮಂಗಳೂರು, ಮಾ.3 ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ತೋರುತ್ತಿರುವುದರಿಂದ ಆಂತರಿಕ ಭದ್ರತೆ ಸಡಿಲವಾಗುತ್ತಿದೆ. ಇದರ ಪರಿಣಾಮವಾಗಿ ಬಾಂಬ್ ಸ್ಫೋಟದಂತಹ ಘಟನೆಗಳಾಗುತ್ತಿವೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದನ್ನೂ ಸಮರ್ಥನೆ ಮಾಡುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧ್ವಂಸಕ ಶಕ್ತಿ, ಗೂಂಡಾಶಕ್ತಿಗಳು ತಲೆ ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಟೀಕಿಸಿದ್ದಾರೆ.
ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇಡೀ ದೇಶ ಭದ್ರತೆ ವಿಚಾರದಲ್ಲಿ ಗಟ್ಟಿಗೊಳ್ಳುತ್ತಿರುವ ಹೊತ್ತಲ್ಲಿ ಕರ್ನಾಟಕದಲ್ಲಿ ಮಾತ್ರ ಬಾಂಬ್ ಸ್ಫೋಟದಂತಹ ವಿಧ್ವಂಸಕ ಕೃತ್ಯ ಆಗುತ್ತಿರುವುದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಭದ್ರತೆ ಸಡಿಲಗೊಳ್ಳುತ್ತಿರುವುದಕ್ಕೆ ಸಾಕ್ಷಿ. ಬೆಂಗಳೂರು ಮಹಾನಗರದಲ್ಲಿ ಹತ್ತು ವರ್ಷಗಳ ಬಳಿಕ ಬಾಂಬ್ ಸ್ಫೋಟ ಆಗಿರುವುದು, ಇದರ ಹಿಂದೆ ನಿಷೇಧಿತ ಐಸಿಸ್ ಸಂಘಟನೆ ಕೈವಾಡದ ಶಂಕೆ ವ್ಯಕ್ತವಾಗಿದೆ. ಆಮೂಲಕ ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ದೇಶ ವಿರೋಧಿ ಶಕ್ತಿಗಳು ಗಟ್ಟಿಯಾಗಿರುವುದನ್ನು ಸೂಚಿಸಿದೆ. ಇದನ್ನು ಜನತೆ ಗಮನಿಸುತ್ತಿದ್ದು ಅಧಿಕಾರವನ್ನು ಯಾರ ಕೈಯಲ್ಲಿ ನೀಡಿದರೆ ಉತ್ತಮ ಎಂಬ ಬಗ್ಗೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ನೆರೆ ರಾಷ್ಟ್ರ ಅಂತ ಹೇಳುತ್ತಿದ್ದಾರೆ. ದೇಶದ ಸಂಸತ್ತಿಗೆ ದಾಳಿ ಮಾಡಿದವರು, ಪುಲ್ವಾಮಾ ದಾಳಿಯ ಮೂಲಕ ನಮ್ಮ ಯೋಧರನ್ನು ಕೊಂದವರು ನೆರೆ ರಾಷ್ಟ್ರದವರೇ. ನಾವು ಅವರನ್ನು ನೆರೆ ರಾಷ್ಟ್ರ ಎಂದು ಒಪ್ಪಿಕೊಳ್ಳಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲೆ ಕಳಕೊಂಡಿದೆ. ದೇಶ ವಿರೋಧಿ ಕೃತ್ಯಗಳಿಗೆ ಆಸ್ಪದ ನೀಡುತ್ತಿರುವುದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ತೊಲಗಿಸಿ ಎಂದು ಕರೆ ಕೊಡಲು ರಾಜ್ಯ ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜನರು ಕಾಂಗ್ರೆಸಿಗೆ ಇದೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ.
ಬಿಜೆಪಿ ಕೇಂದ್ರೀಯ ಮಂಡಳಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪೈಕಿ 57 ಮಂದಿ ಹಿಂದುಳಿದ ವರ್ಗಕ್ಕೆ ಅವಕಾಶ ಕೊಟ್ಟಿದ್ದಾರೆ, ಇದು ಬಿಜೆಪಿ ಹಿಂದುಳಿದ ವರ್ಗಗಳ ಬಗ್ಗೆ ಬದ್ಧತೆ ಹೊಂದಿರುವುದನ್ನು ತೋರಿಸುತ್ತದೆ ಎಂದು ಹೇಳಿದ ಅವರು, ಮಂಗಳೂರು ಅವಿಭಜಿತ ದ.ಕ. ಜಿಲ್ಲೆ ಸಂಘಟನಾತ್ಮಕವಾಗಿ ಪ್ರಬಲ ಕ್ಷೇತ್ರ. ಈ ಭಾಗದಲ್ಲಿ ಪಕ್ಷ ಅತಿ ಹೆಚ್ಚು ಅಂತರದಿಂದ ಗೆಲ್ಲುವ ಮೂಲಕ ಇಡೀ ರಾಜ್ಯಕ್ಕೆ ಸಂದೇಶ ನೀಡಲಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ನಾರಾಯಣ ರೆಂಜ, ವಿಠಲ್ ಪೂಜಾರಿ, ಕಿಶೋರ್ ಪುತ್ತೂರು, ಗಿರೀಶ್ ಕುಮಾರ್ ಇದ್ದರು.
Internal security is being eroded as the Congress government is soft on terrorism. As a result, incidents like bomb blasts are taking place.Internal security is being eroded as the Congress government is soft on terrorism. As a result, incidents like bomb blasts are taking place.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm