MP Shobha Karandlaje, Udupi: ಉಡುಪಿಯಲ್ಲಿ ಸಂಸದೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದಲೇ ಶಕ್ತಿ ಪ್ರದರ್ಶನ, ಟಿಕೆಟ್ ನೀಡದಂತೆ ಹಕ್ಕೊತ್ತಾಯ 

03-03-24 04:24 pm       Udupi Correspondent   ಕರಾವಳಿ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ.

ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ. 

ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್‌ ರ‍್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. 

ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.

Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.